7:01 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ

20/08/2021, 21:24

ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. 

ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬವು ಆಚರಣೆ ನಡೆಯಲಿಲ್ಲ. ಸರಕಾರ ಆದೇಶದಂತೆ ಸಂಜೆ 4 ಗಂಟೆಗೆ ದೇವರು ಕಳಿಸುವ ಕಾರ್ಯಕ್ರಮ ಪ್ರಾರಂಭಿಸಲಾಯಿತು. 

ಪ್ರತಿವರ್ಷದಂತೆ ಈ ವರ್ಷವೂ ಕೂಡ ಭಕ್ತ ತಮ್ಮ ಹರಕೆಗಳ ತೀರಿಸುತ್ತಾ, ಕೋವಿಡ್ ಇರುವುದರಿಂದ ಶಾಂತಿಯುತವಾಗಿ ಕಾರ್ಯಕ್ರಮ ನೆರವೇರಿಸಿದರು.

ದೇವರು ಕಂಬಾರ ಮನೆಗೆ ಹೋಗಿ ದರ್ಶನ ಮಾಡಿ ಬರೋದು ಮತ್ತು ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ವಾಡಿಕೆ. ಮತ್ತೆ ದೇವರು ಹೋಳಿಗೆ ಹೋಗುವಾಗ ಬೆಂಕಿಯಲ್ಲಿ ದೇವರು ನಡೆದಾಡುವ ದೃಶ್ಯ ಆಕರ್ಷಣೀಯವಾದದ್ದು.

ಏನೇ ಆದರೂ ಈ ಬಾರಿ ಕೊರೊನಾ ಕರಿನೆರಳು ಹರಿದಂತೆ ಆಯ್ತು. ದೇವರ ಮನದಲ್ಲಿ ನೆನೆದು ತಮ್ಮ ಹರಕೆಗಳನ್ನು ತೀರಿಸುವ ಕಾರ್ಯಕ್ರಮ ನೆರವೇರಿತು. ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಸರಳಾಗಿ

ಮೋಹರಂ ಹಬ್ಬ ಆಚರಣೆ ಮಾಡಲಾಯಿತು. ಸಂತೆ ಕೆಲ್ಲೂರು ಗ್ರಾಮದಲ್ಲಿ ಬೆಳಗ್ಗೆ 5 ಗಂಟೆಗೆ ದೇವರು ಅಲ್ಲಲ್ಲಿ ಬಿಲಾಲ್ ತೆಗೆದುಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ  ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು