2:27 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಘಟಿಕೋತ್ಸವ ರಾಜ್ಯಪಾಲರಿಂದ ಹೈಜಾಕ್?: ಪಿಎಚ್ ಡಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸುವ ಕನಸಿಗೆ ಕಲ್ಲು ಚಪ್ಪಡಿ ಎಳೆದ ಗೆಹ್ಲೋಟ್!

15/06/2024, 23:54

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಿ ಘಟಿಕೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಹೈಜಾಕ್ ಮಾಡಿದ ಘಟನೆ ನಡೆದಿದೆ. ರಾಜ್ಯಪಾಲರ ಮೊಂಡುತನದಿಂದ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ಅವರ(ರಾಜ್ಯಪಾಲರ) ಕೈಯಿಂದ ಸರ್ಟಿಫಿಕೇಟ್ ಪಡೆಯುವ ಅವಕಾಶದಿಂದ ವಂಚಿತರಾಗಿದ್ದಾರೆ.
ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದ ಈ ಎಲ್ಲ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಕುಲಾಧಿಪತಿಯೂ ಆಗಿರುವ ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಡೀ ಕಾರ್ಯಕ್ರಮವನ್ನು ತನಗೆ ಬೇಕಾದಂತೆ ಬದಲಾಯಿಸಿ ದರ್ಬಾರು ನಡೆಸಿದರು.
ಪ್ರತಿ ವರ್ಷದಂತೆ ಶಿಷ್ಠಾಚಾರ ಪ್ರಕಾರ ಸಮಾರಂಭ ನಡೆಸಲು ಮಂಗಳೂರು ವಿವಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧತೆ ನಡೆಸಿದ್ದರು. ಆದರೆ ರಾಜ್ಯಪಾಲ ಗೆಹ್ಲೋಟ್ ಅದನ್ನೆಲ್ಲ ತಲೆಕೆಳಗೆ ಮಾಡಿಬಿಟ್ಟರು. ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲರು
ಕುಳಿತಲ್ಲಿಂದಲೇ ಏರುಧ್ವನಿಯಲ್ಲೇ ತಮಗೆ ಬೇಕಾದ ರೀತಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ದೇಶಿಸುತ್ತಿದ್ದರು. ರಾಜ್ಯಪಾಲರ ಅಂಗರಕ್ಷಕ್ಕೆ ಸಹಾಯಕ್ಕೆ ನಿಂತಿದ್ದರು.
ರಾಜ್ಯಪಾಲರು ಘಟಿಕೋತ್ಸವದ ಕೊನೆಯಲ್ಲಿ ಹಾಡಬೇಕಿದ್ದ ರಾಷ್ಟ್ರಗೀತೆಯನ್ನು ಆರಂಭದಲ್ಲೇ ಹಾಡಲು ಸೂಚಿಸಿದರು. ಹಾಗೆ ಡಾಕ್ಟರೇಟ್ ಪಡೆದ ವಿದ್ಯಾರ್ಥಿಗಳು ಈ ಬಾರಿ ರಾಜ್ಯಪಾಲರಿಂದ ಪಿಎಚ್ ಡಿ ಸರ್ಟಿಫಿಕೇಟ್ ಪಡೆದು ಫೋಟೋ ಕ್ಲಿಕ್ಕಿಸಿಕೊಳ್ಳುವ ಅವಕಾಶದಿಂದ ವಂಚಿತರಾಗಬೇಕಾಯಿತು. ಸಾಮಾನ್ಯವಾಗಿ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿಯನ್ನು ರಾಜ್ಯಪಾಲರು ತಮ್ನ ಕೈಯಿಂದಲೇ ನೀಡುವುದು ವಾಡಿಕೆ. ಸಾಧನೆ ಮಾಡಿ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಸರ್ಟಿಫಿಕೇಟ್ ಪಡೆಯುವ ಸಂತಸ ಹಾಗೂ ಹೆಮ್ಮೆಯ ಕ್ಷಣವನ್ನು ಅವಿಸ್ಮರಣೀಯಗೊಳಿಸಲು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಇಂತಹ ಅವಕಾಶಕ್ಕೆ ರಾಜ್ಯಪಾಲರು ಕಲ್ಲು ಚಪ್ಪಡಿ ಎಳೆದಿದ್ದಾರೆ. ಸಂಶೋಧನಾರ್ಥಿಗಳಿಗೆ ಪಿಎಚ್.ಡಿ. ಸರ್ಟಿಫಿಕೇಟ್‌ನ್ನು ಕಾರ್ಯಕ್ರಮದ ಮೊದಲೇ ಹಂಚಿ ನಂತರ ಎಲ್ಲರನ್ನೂ ಒಟ್ಟಿಗೆ ವೇದಿಕೆಗೆ ಕರೆದು ರಾಜ್ಯಪಾಲರು ಗ್ರೂಪ್ ಪೊಟೋಗೆ ಫೋಸ್ ನೀಡಿ ಕೈತೊಳೆದುಕೊಂಡಿದ್ದಾರೆ. ಕೇಂದ್ರ ಸರಕಾರ ಈ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಲಿ ಎನ್ನುವುದು ಈಗ ಕೇಳಿ ಬರುತ್ತಿರುವ ಹಕ್ಕೊತ್ತಾಯ.

ಇತ್ತೀಚಿನ ಸುದ್ದಿ

ಜಾಹೀರಾತು