2:23 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ‘ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ’  ವಿಚಾರ ಸಂಕಿರಣ

20/08/2021, 21:33

ಮಂಗಳೂರು(reporterkarnataka.com) ಸದ್ಭಾವನ ದಿನಾಚರಣೆಯ ಅಂಗವಾಗಿ ನಗರದ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು “ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ” ಎಂಬ  ವಿಚಾರ ಸಂಕಿರಣವನ್ನು ಆಯೋಜಿಸಿತ್ತು.   

ಈ ಆನ್ಲೈನ್ ಕಾರ್ಯಾಗಾರದಲ್ಲಿ  ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಚನ್ನ ಗಿರಿ  ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ಕನ್ನಡ ವಿಭಾಗದ  ಪ್ರಾಧ್ಯಾಪಕ ಷಣ್ಮುಖ ಕೆ. ಎಚ್, ಸಂವಿಧಾನದ ರೀತಿ ನೀತಿಗಳು, ಹಕ್ಕು ಮತ್ತು ಕರ್ತವ್ಯಗಳು,

ಅದರ ಗುರಿ ಮತ್ತು ಉದ್ದೇಶ, ಅದನ್ನು ಜನಸಾಮಾನ್ಯರು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಉದಾಹರಣೆಯಾಗಿ ನೀಡಿ ಹಾಗೆ ಇತಿಹಾಸವನ್ನು ಸಹ ಆಧಾರವಾಗಿಟ್ಟುಕೊಂಡು ಪ್ರಸ್ತುತ ಸಮಾಜದ ಸ್ಥಿತಿಗತಿಯ ಬಗ್ಗೆ ಕೂಲಂಕುಶವಾಗಿ ಹೇಳಿದರು. 

“ಮನುಷ್ಯ ಜಾತಿ ತಾನೊಂದೆ ವಲಂ” ಎಂಬ ಪಂಪನ ಮಾತಿನಂತೆ ರಾಷ್ಟ್ರೀಯ ಭಾವೈಕ್ಯತೆಯು  ಪ್ರತಿಯೊಬ್ಬರಲ್ಲೂ ಮೂಡಬೇಕು,ಶಿಕ್ಷಕರು ಮತ್ತು ಪೋಷಕರ ಪಾತ್ರ ಭಾವೈಕ್ಯತೆ ಮೂಡಿಸುವಲ್ಲಿ ಬಹುಮುಖ್ಯ ಎಂಬುದನ್ನು ತಿಳಿಸಿದ್ದರು.  ಸೌಹಾರ್ದತೆ, ಸದ್ಭಾವನೆ ಇತ್ಯಾದಿಗಳೆಲ್ಲಾ ಈಗಿನ ದಿನಕ್ಕೆ ಅತಿ ಅಗತ್ಯವಾದದ್ದು. ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆಗಳ ಹೆಸರಿನಲ್ಲಿ ಒಡೆದು ಹೋಗುತ್ತಿರುವ ನಮ್ಮ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಗಳು. ದೇಶದ ಪ್ರತಿಯೊಬ್ಬ ಪ್ರಜೆಗಳು ಈ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ದೇಶ ವಿಶ್ವದಲ್ಲಿಯೇ ಒಂದು ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ.ಅದೇ ರೀತಿ ಜೀವ ವೈವಿಧ್ಯತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಹಲವಾರು ಮಾಹಿತಿಯನ್ನು ನೀಡಿದರು.  

ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು  ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ವಹಿಸಿದ್ದರು. ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಚಾರ ಸಂಕಿರಣದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಈ ವಿಚಾರ ಸಂಕಿರಣದ  ಪ್ರಾಮುಖ್ಯತೆಯನ್ನು ತಿಳಿಸುತ್ತಾ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಇನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ ಕೆ.ಸ್ವಯಂಸೇವಕರಿಗೆ ಸದ್ಭಾವನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ವಯಂಸೇವಕ  ಅನಂತ ಕೃಷ್ಣ ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕ ಪರಶುರಾಮ  ಕಾರ್ಯಕ್ರಮ ನಿರ್ವಹಿಸಿದರು.


ಕೆನರಾ ಕಾಲೇಜು, ಮಂಗಳೂರು ಮತ್ತು  ಶ್ರೀ ಶಿವಲಿಂಗೇಶ್ವರ  ಸ್ವಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಗಿರಿ ಇದರ ರಾಸೆ ಯೋಜನಾ ಸ್ವಯಂಸೇವಕರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು