5:12 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ‘ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ’  ವಿಚಾರ ಸಂಕಿರಣ

20/08/2021, 21:33

ಮಂಗಳೂರು(reporterkarnataka.com) ಸದ್ಭಾವನ ದಿನಾಚರಣೆಯ ಅಂಗವಾಗಿ ನಗರದ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು “ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ” ಎಂಬ  ವಿಚಾರ ಸಂಕಿರಣವನ್ನು ಆಯೋಜಿಸಿತ್ತು.   

ಈ ಆನ್ಲೈನ್ ಕಾರ್ಯಾಗಾರದಲ್ಲಿ  ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಚನ್ನ ಗಿರಿ  ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ಕನ್ನಡ ವಿಭಾಗದ  ಪ್ರಾಧ್ಯಾಪಕ ಷಣ್ಮುಖ ಕೆ. ಎಚ್, ಸಂವಿಧಾನದ ರೀತಿ ನೀತಿಗಳು, ಹಕ್ಕು ಮತ್ತು ಕರ್ತವ್ಯಗಳು,

ಅದರ ಗುರಿ ಮತ್ತು ಉದ್ದೇಶ, ಅದನ್ನು ಜನಸಾಮಾನ್ಯರು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಉದಾಹರಣೆಯಾಗಿ ನೀಡಿ ಹಾಗೆ ಇತಿಹಾಸವನ್ನು ಸಹ ಆಧಾರವಾಗಿಟ್ಟುಕೊಂಡು ಪ್ರಸ್ತುತ ಸಮಾಜದ ಸ್ಥಿತಿಗತಿಯ ಬಗ್ಗೆ ಕೂಲಂಕುಶವಾಗಿ ಹೇಳಿದರು. 

“ಮನುಷ್ಯ ಜಾತಿ ತಾನೊಂದೆ ವಲಂ” ಎಂಬ ಪಂಪನ ಮಾತಿನಂತೆ ರಾಷ್ಟ್ರೀಯ ಭಾವೈಕ್ಯತೆಯು  ಪ್ರತಿಯೊಬ್ಬರಲ್ಲೂ ಮೂಡಬೇಕು,ಶಿಕ್ಷಕರು ಮತ್ತು ಪೋಷಕರ ಪಾತ್ರ ಭಾವೈಕ್ಯತೆ ಮೂಡಿಸುವಲ್ಲಿ ಬಹುಮುಖ್ಯ ಎಂಬುದನ್ನು ತಿಳಿಸಿದ್ದರು.  ಸೌಹಾರ್ದತೆ, ಸದ್ಭಾವನೆ ಇತ್ಯಾದಿಗಳೆಲ್ಲಾ ಈಗಿನ ದಿನಕ್ಕೆ ಅತಿ ಅಗತ್ಯವಾದದ್ದು. ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆಗಳ ಹೆಸರಿನಲ್ಲಿ ಒಡೆದು ಹೋಗುತ್ತಿರುವ ನಮ್ಮ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಗಳು. ದೇಶದ ಪ್ರತಿಯೊಬ್ಬ ಪ್ರಜೆಗಳು ಈ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ದೇಶ ವಿಶ್ವದಲ್ಲಿಯೇ ಒಂದು ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ.ಅದೇ ರೀತಿ ಜೀವ ವೈವಿಧ್ಯತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಹಲವಾರು ಮಾಹಿತಿಯನ್ನು ನೀಡಿದರು.  

ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು  ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ವಹಿಸಿದ್ದರು. ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಚಾರ ಸಂಕಿರಣದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಈ ವಿಚಾರ ಸಂಕಿರಣದ  ಪ್ರಾಮುಖ್ಯತೆಯನ್ನು ತಿಳಿಸುತ್ತಾ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಇನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ ಕೆ.ಸ್ವಯಂಸೇವಕರಿಗೆ ಸದ್ಭಾವನ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ವಯಂಸೇವಕ  ಅನಂತ ಕೃಷ್ಣ ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕ ಪರಶುರಾಮ  ಕಾರ್ಯಕ್ರಮ ನಿರ್ವಹಿಸಿದರು.


ಕೆನರಾ ಕಾಲೇಜು, ಮಂಗಳೂರು ಮತ್ತು  ಶ್ರೀ ಶಿವಲಿಂಗೇಶ್ವರ  ಸ್ವಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಗಿರಿ ಇದರ ರಾಸೆ ಯೋಜನಾ ಸ್ವಯಂಸೇವಕರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು