3:09 AM Saturday28 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ

16/06/2024, 14:37

ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್
ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಆಸ್ತಿ ತೆರಿಗೆ,ಸ್ಟಾಂಪ್ ಡ್ಯೂಟಿ ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು