3:21 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ

16/06/2024, 14:37

ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್
ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಆಸ್ತಿ ತೆರಿಗೆ,ಸ್ಟಾಂಪ್ ಡ್ಯೂಟಿ ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು