7:30 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ 2ನೇ ಬಾರಿಗೆ ಆಯ್ಕೆಯಾದ ಐವನ್ ಡಿಸೋಜರಿಗೆ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ಸನ್ಮಾನ

17/06/2024, 17:40

ಮಂಗಳೂರು(reporterkarnataka.com): ಕಥೊಲಿಕ್ ಸಭಾ-ಸಿಟಿ ವಲಯ ವತಿಯಿಂದ
ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ
ಐವನ್ ಡಿಸೋಜ ಅವರಿಗೆ ಅಭಿನಂದನಾ ಕಾರ್ಯಕ್ರಮ
ಭಾನುವಾರ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ನಡೆಯಿತು.
ಐವನ್ ಡಿಸೋಜ ಅವರು ಸನ್ಮಾನ ಸ್ವೀಕರಿಸಿ, ಸನ್ಮಾನ ಮಾಡಿದ ಸಿಟಿ ವಲಯಕ್ಕೆ ಧನ್ಯವಾದ ತಿಳಿಸಿದರು. ಜಾತಿ ಧರ್ಮ ನೋಡದೆ ಎಲ್ಲರೊಂದಿಗೆ ಬೆರೆತು ಕೆಲಸ ಮಾಡೋಣ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಜಯ ನಮ್ಮದೇ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ-ಸಿಟಿ ವಲಯ ಅಧ್ಯಕ್ಷರಾದ ಅರುಣ್ ಡಿಸೋಜ ವಹಿಸಿದ್ದರು.
ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಶಕ್ತಿನಗರ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಫಾದರ್ ಆಪೊಲಿನಾರಿಸ್ ಕ್ರಾಸ್ತಾ , ಸಿಟಿ ವಲಯದ ಕಾರ್ಯದರ್ಶಿಯಾದ ಡೋರಾ ಡಿಕುನ್ಹಾ, ಶಕ್ತಿನಗರ ಚರ್ಚ್‌ನ ಉಪಾಧ್ಯಕ್ಷರಾದ ಸ್ಟ್ಯಾನಿ ಮಸ್ಕರೇನಸ್, ಸಿಟಿ ವಲಯದ ಎಲ್ಲಾ ಮಾಜಿ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸದಸ್ಯರು , ಘಟಕದ ಎಲ್ಲಾ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಥೊಲಿಕ್ ಸಭಾ ಸಿಟಿ ವಲಯ ನಿಕಟ ಪೂರ್ವ ಅಧ್ಯಕ್ಷರಾದ ವಿಲ್ಫ್ರೆಡ್ ಆಲ್ವಾರಿಸ್ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು