7:13 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ 2ನೇ ಬಾರಿಗೆ ಆಯ್ಕೆಯಾದ ಐವನ್ ಡಿಸೋಜರಿಗೆ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ಸನ್ಮಾನ

17/06/2024, 17:40

ಮಂಗಳೂರು(reporterkarnataka.com): ಕಥೊಲಿಕ್ ಸಭಾ-ಸಿಟಿ ವಲಯ ವತಿಯಿಂದ
ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ
ಐವನ್ ಡಿಸೋಜ ಅವರಿಗೆ ಅಭಿನಂದನಾ ಕಾರ್ಯಕ್ರಮ
ಭಾನುವಾರ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ನಡೆಯಿತು.
ಐವನ್ ಡಿಸೋಜ ಅವರು ಸನ್ಮಾನ ಸ್ವೀಕರಿಸಿ, ಸನ್ಮಾನ ಮಾಡಿದ ಸಿಟಿ ವಲಯಕ್ಕೆ ಧನ್ಯವಾದ ತಿಳಿಸಿದರು. ಜಾತಿ ಧರ್ಮ ನೋಡದೆ ಎಲ್ಲರೊಂದಿಗೆ ಬೆರೆತು ಕೆಲಸ ಮಾಡೋಣ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಜಯ ನಮ್ಮದೇ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ-ಸಿಟಿ ವಲಯ ಅಧ್ಯಕ್ಷರಾದ ಅರುಣ್ ಡಿಸೋಜ ವಹಿಸಿದ್ದರು.
ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಶಕ್ತಿನಗರ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಫಾದರ್ ಆಪೊಲಿನಾರಿಸ್ ಕ್ರಾಸ್ತಾ , ಸಿಟಿ ವಲಯದ ಕಾರ್ಯದರ್ಶಿಯಾದ ಡೋರಾ ಡಿಕುನ್ಹಾ, ಶಕ್ತಿನಗರ ಚರ್ಚ್‌ನ ಉಪಾಧ್ಯಕ್ಷರಾದ ಸ್ಟ್ಯಾನಿ ಮಸ್ಕರೇನಸ್, ಸಿಟಿ ವಲಯದ ಎಲ್ಲಾ ಮಾಜಿ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸದಸ್ಯರು , ಘಟಕದ ಎಲ್ಲಾ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಥೊಲಿಕ್ ಸಭಾ ಸಿಟಿ ವಲಯ ನಿಕಟ ಪೂರ್ವ ಅಧ್ಯಕ್ಷರಾದ ವಿಲ್ಫ್ರೆಡ್ ಆಲ್ವಾರಿಸ್ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು