1:28 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಬಿಜೆಪಿ ನಾಯಕ ಭಾನುಪ್ರಕಾಶ್ ಹೃದಯಾಘಾತಕ್ಕೆ ಬಲಿ: ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ದುರ್ಘಟನೆ

17/06/2024, 18:21

ಶಿವಮೊಗ್ಗ(reporterkarnataka.com): ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರುದ್ಧ ಬಿಜೆಪಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನಾ ಭಾಷಣ ಮಾಡಿದ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಅವರು ಕೆಲವೇ ನಿಮಿಷಗಳಲ್ಲಿ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ.


ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು.
ರಾಜ್ಯ ಸರಕಾರವನ್ನು ಅಣಕಿಸಲು ಸಾವಿನ ಚಟ್ಟವನ್ನು ಪ್ರತಿಭನೆಯ ವೇಳೆ ಅಣಕು ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾನುಪ್ರಕಾಶ್ ಅವರು ಭಾಷಣ ಮಾಡಿದ್ದರು.
ಪ್ರತಿಭಟನೆ ಮುಗಿಸಿ ಹಿಂತಿರುಗಲು ಕಾರಿನಲ್ಲಿ ಕುಳಿತ್ತಿದ್ದ ವೇಳೆ ಭಾನುಪ್ರಕಾಶ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಸಮೀಪದ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್ ಅವರು ಕೊನೆಯುಸಿರೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು