11:32 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಘಟಿಕೋತ್ಸವ: ರಾಜ್ಯಪಾಲರ ನಡೆಗೆ ಎನ್ ಎಸ್ ಯುಐ ತೀವ್ರ ಖಂಡನೆ

17/06/2024, 21:07

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ವೇಳೆ ರಾಜ್ಯಪಾಲರ ನಡೆ ಕುರಿತು ಎನ್ ಎಸ್ ಯುಐ ತೀವ್ರ
ಖಂಡನೆ ವ್ಯಕ್ತಪಡಿಸಿದೆ.
ಘಟಿಕೋತ್ಸವ ಕಾರ್ಯಕ್ರಮ ಹಲವಾರು ವರ್ಷಗಳಿಂದ ಉತ್ತಮ ಗುಣಮಟ್ಟದಲ್ಲಿ ನಡೆಯುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಘಟಿಕೋತ್ಸವ ಕಾರ್ಯಕ್ರಮ ಉತ್ತಮ ರೂಪುರೇಷೆಯನ್ನು ಒಳಗೊಂಡಿತ್ತು. ಕಾರ್ಯಕ್ರಮದ ಸಂಪೂರ್ಣ ವರದಿ ರಾಜ್ಯಪಾಲರಿಗೆ ಗೊತ್ತಿತ್ತು.
ಆದರೆ ವೇದಿಕೆಗೆ ಬಂದ ಮೇಲೆ ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗ ಕಾರ್ಯಕ್ರಮವನ್ನು ಒಟ್ಟು ಗೊಂದಲಕ್ಕೆ ಎಡೆಮಾಡಿ ಕೊಟ್ಟಿರೋದು ಅತೀವ ಬೇಸರ ತಂದಿದೆ. ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಾಮೂಹಿಕವಾಗಿ ಕಾಣಾಚಾರಕ್ಕೆ ನೀಡಿದ ಡಾಕ್ಟರೇಟ್ ಅಂತಿತ್ತು. ನಮ್ಮ ವಿಶ್ವವಿದ್ಯಾನಿಲಯ ಉಪಕುಲಪತಿಗಳ ಜೊತೆಗೆ ನಡೆದು ಕೊಂಡ ವರ್ತನೆಯೂ ರಾಜ್ಯಭಾರ ಮೆರೆಯುವಂತಿತ್ತು.
ಒಟ್ಟಿನಲ್ಲಿ ಒಂದು ಉತ್ತಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗದ ಅನಾವಶ್ಯಕ ಗೊಂದಲದ ಹಸ್ತಕ್ಷೇಪದಿಂದ ಅಸ್ತವ್ಯಸ್ತಕ್ಕೆ ಕಾರಣವಾಯಿತು.
ರಾಜ್ಯಪಾಲರ ಈ ರಾಜ್ಯಭಾರವನ್ನು ಎನ್ ಎಸ್ ಯುಐ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು