7:02 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಕನಿಷ್ಠ 9 ಮಂದಿ ಸಾವು; 40ಕ್ಕೂ ಅಧಿಕ ಮಂದಿಗೆ ಗಾಯ

17/06/2024, 21:21

ನ್ಯೂಜಲ್ಪೈಗುರಿ(reporterkarnataka.com): ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂದಿನ 3 ಕೋಚ್‌ಗಳು ಹಳಿತಪ್ಪಿ ಕನಿಷ್ಠ 9 ಪ್ರಯಾಣಿಕರು ಸಾವನ್ನಪ್ಪಿದ್ದು, ಇತರ 41 ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಡಾರ್ಜಿಲಿಂಗ್‌ನಲ್ಲಿ ಅಸ್ಸಾಂನ ಸಿಲ್ಚಾರ್‌ನಿಂದ ಪಶ್ಚಿಮ ಬಂಗಾಳದ ಸೀಲ್ದಾಹ್‌ಗೆ ಪ್ರಯಾಣಿಸುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜನರು ಸ್ಥಳದಲ್ಲಿ ಜಮಾಯಿಸಿದರು.

ರೈಲಿನೊಳಗೆ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯ ಭರದಿಂದ ನಡೆಯಿತು.
ಅಪಘಾತವು ಬೆಳಿಗ್ಗೆ 8:30 ರ ಸುಮಾರಿಗೆ ಸಂಭವಿಸಿದೆ ಮತ್ತು ಉತ್ತರ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸುಮಾರು 11 ಕಿಮೀ ದೂರದಲ್ಲಿ ನಡೆದಿದೆ. ಪೂರ್ವ ಮತ್ತು ಈಶಾನ್ಯ ಭಾರತದ ಈಶಾನ್ಯ ಫ್ರಾಂಟಿಯರ್ ರೈಲ್ವೇ ವಲಯದಲ್ಲಿನ ಅತಿದೊಡ್ಡ ಮತ್ತು ಜನನಿಬಿಡ ನಿಲ್ದಾಣಗಳಲ್ಲಿ ಇದು ಒಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂಎನ್‌ಆರ್‌ಎಫ್‌ನಿಂದ 10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಪ್ರತಿ ಮೃತರ ಮುಂದಿನ ಕುಟುಂಬಕ್ಕೆ ₹ 2.5 ಲಕ್ಷ ಮತ್ತು ಸಣ್ಣ ಗಾಯಗಳಿಗೆ ₹ 50,000 ಪರಿಹಾರ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು