5:53 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಗ್ಯಾರಂಟಿಗೆ 60 ಸಾವಿರ ಕೋಟಿ ; ಇಂಧನ ತೆರಿಗೆ ಹೆಚ್ಚಳದಿಂದ ಬರುವುದು ಬರೇ 3 ಸಾವಿರ ಕೋಟಿ; ಪ್ರತಿಪಕ್ಷದ ನಾಯಕರಿಗೆ ಇದೆಲ್ಲ ಅರ್ಥ ಆಗೋಲ್ಲ: ಸಿಎಂ

19/06/2024, 13:39

ಬೆಂಗಳೂರು(reporterkarnataka.com): ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು 60 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಮಾತುಗಳಿಗೆ ಅರ್ಥವಿಲ್ಲ. ಇದೆಲ್ಲಾ ಅವರಿಗೆ ಅರ್ಥ ಆಗುವುದೂ ಇಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಅವರಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಅವರು ಈ ಕುರಿತು ಬರೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು