3:25 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಗ್ಯಾರಂಟಿಗೆ 60 ಸಾವಿರ ಕೋಟಿ ; ಇಂಧನ ತೆರಿಗೆ ಹೆಚ್ಚಳದಿಂದ ಬರುವುದು ಬರೇ 3 ಸಾವಿರ ಕೋಟಿ; ಪ್ರತಿಪಕ್ಷದ ನಾಯಕರಿಗೆ ಇದೆಲ್ಲ ಅರ್ಥ ಆಗೋಲ್ಲ: ಸಿಎಂ

19/06/2024, 13:39

ಬೆಂಗಳೂರು(reporterkarnataka.com): ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು 60 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಮಾತುಗಳಿಗೆ ಅರ್ಥವಿಲ್ಲ. ಇದೆಲ್ಲಾ ಅವರಿಗೆ ಅರ್ಥ ಆಗುವುದೂ ಇಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಅವರಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಅವರು ಈ ಕುರಿತು ಬರೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು