1:18 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು