8:13 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು