1:29 AM Monday16 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ… ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು