10:01 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು