6:06 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ

20/08/2021, 22:51

ಕಾರವಾರ(reporterkarnataka.com):
ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

ದಿನೇಶ ಹೆಗಡೆ, ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು