11:46 AM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ

20/08/2021, 22:51

ಕಾರವಾರ(reporterkarnataka.com):
ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

ದಿನೇಶ ಹೆಗಡೆ, ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು