3:44 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು