7:38 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಪಡುಬಿದ್ರಿ: ಜೂನ್ 23ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

21/06/2024, 19:04

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕದ ಜಂಟಿ ಸಹಯೋಗದೊಂದಿಗೆ ಜೂನ್ 23ರಂದು ಪೂರ್ವಾಹ್ನ 9.33ರಿಂದ ಅಪರಾಹ್ನ 12.30ರವರೆಗೆ ಪಡುಬಿದ್ರಿಯ
ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ)ಯಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ ,ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿಪಿ ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗಿಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು