1:44 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ

21/08/2021, 09:31

ಬೆಂಗಳೂರು(reporterkarnataka.com):
ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿದೆ. 

ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು, ಶೇಖ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಳಗಾವಿ,  ಇಸ್ಲಾಮಿಯಾ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು, ಏಕಲವ್ಯ ಇನ್ ಸ್ಟಿಟ್ಟೂಟ್ ಆಫ್ ಟೆಕ್ನಾಲಜಿ, ಚಾಮರಾಜ ನಗರ, ಶ್ರೀ ವಿನಾಯಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್, ಬಿಟಿಎಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ ಮೆಂಟ್ ಬೆಂಗಳೂರು ಇವು 2021- 22ನೇ ಸಾಲಿಗೆ ಮಾನ್ಯತೆ ಇಲ್ಲದ ಕಾಲೇಜುಗಳು.

ಮಾನ್ಯತೆ ಕಳೆದುಕೊಂಡ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು. ಈ ಕುರಿತು ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು. ಯಾರಾದರೂ ಈ ಕಾಲೇಜುಗಳಲ್ಲಿ ಪ್ರವೇಶ ಮುಂದುವರಿಸಿದರೆ ಅದಕ್ಕೆ ವಿಟಿಯು ಜವಾಬ್ದಾರವಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು