5:55 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ

22/06/2024, 22:35

ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ.
ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿಯನ್ನು ಅಭಿವೃದ್ದಿಯ ಹೆಸರಿನಲ್ಲಿ ಕೇವಲ ರಸ್ತೆ ಕಾಮಗಾರಿಗಾಗಿಯೇ ವಿನಿಯೋಗಿಸಲಾಗುತ್ತದೆ.40 ಪರ್ಸೆಂಟ್ ಕಮಿಷನ್ ಹೆಸರಿನಲ್ಲಿ ಕೋಟ್ಯಂತರ ಹಣವನ್ನು ನುಂಗಿ ಹಾಕಲು ಏಕೈಕ ಸಾಧನ ರಸ್ತೆ ಅಭಿವೃದ್ಧಿಯಾಗಿದೆ .ರಸ್ತೆಗೆ ಕಾಂಕ್ರೀಟ್ ಮಾಡುವ ಸಂದರ್ಭದಲ್ಲಿ ರಸ್ತೆಯ ಅಡಿ ಭಾಗದಲ್ಲಿರುವ ಕೇಬಲ್, ನೀರಿನ ಪೈಪ್ ಲೈನ್, ಚರಂಡಿ ಸೇರಿದಂತೆ ಎಲ್ಲವುಗಳನ್ನು ರಸ್ತೆಯ ಬದಿಗೆ ಸರಿಸಿದ ಬಳಿಕವೇ ಕಾಂಕ್ರೀಟ್ ಮಾಡಬೇಕೆಂಬ ನಿಯಮವಿದ್ದರೂ, ಅವೆಲ್ಲವುಗಳನ್ನು ಗಾಳಿಗೆ ತೂರಿ, ಕಾಮಗಾರಿಗಾಗಿ ಮೀಸಲಿಟ್ಟ ಕೋಟ್ಯಂತರ ಹಣ ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯದಿದ್ದರೆ ವಾಪಸ್ ಹೋಗುವ ಭೀತಿಯಿಂದ ತರಾತುರಿಯಲ್ಲಿ ಇದ್ದ ರಸ್ತೆಗೆ ಕಾಂಕ್ರೀಟ್ ಮಾಡಲಾಗುತ್ತದೆ. ಬಳಿಕ ನೀರಿನ ಪೈಪ್ ಸೋರಿಕೆ ಕಂಡಾಗ, ಕೇಬಲ್ ಹಾಕುವಾಗ ಹಾಗೂ ಒಳಚರಂಡಿ ದುರಸ್ತಿಯ ಹೆಸರಿನಲ್ಲಿ ಅಗಿಂದ್ದಾಗೆ ಅಗೆಯಲಾಗುತ್ತದೆ. ಒಟ್ಟಿನಲ್ಲಿ ರಸ್ತೆಯ ಕಾಂಕ್ರೀಟೀಕರಣಗಿಂತಲೂ ಅಗೆಯುವ ಹೆಸರಿನಲ್ಲಿ ದುಪ್ಪಟ್ಟು ಹಣವನ್ನು ನುಂಗಿ ಹಾಕಲಾಗುತ್ತದೆ. ಇದರಿಂದ ಬಿಜೆಪಿ ಆಡಳಿತದ ಬ್ರಹ್ಮಾಂಡ ಭ್ರಷ್ಟಾಚಾರದ ವಿರಾಟ್ ಸ್ವರೂಪ ಬಹಿರಂಗಗೊಂಡಿದೆ ಎಂದು ಸಿಪಿಎಂ ಅಕ್ರೋಶ ವ್ಯಕ್ತಪಡಿಸಿದೆ.


ಬೋಳಾರ ಮುಳಿಹಿತ್ಲು ಪ್ರದೇಶದ ಅತ್ಯಂತ ಪ್ರಮುಖ ರಸ್ತೆಯ ಕಾಂಕ್ರೀಟೀಕರಣ ಕಳೆದ ತಿಂಗಳಷ್ಟೇ ಮುಗಿದಿದ್ದು ಈಗ ಮತ್ತೆ ಕ್ಷುಲ್ಲಕ ಕಾರಣಗಳನ್ನೊಡ್ಡಿ ಮತ್ತೆ ಅಗೆಯಲಾಗಿದೆ. ಇಂತಹ ಅವೈಜ್ಞಾನಿಕ ಕ್ರಮಗಳಿಂದ ಜನತೆಯ ತೆರಿಗೆಯ ಹಣ ವಿಪರೀತವಾಗಿ ಪೋಲಾಗುತ್ತಿದ್ದು ಈ ಬಗ್ಗೆ ಮಂಗಳೂರಿನ ಜನತೆ ತೀರಾ ಎಚ್ಚರದಿಂದಿರಬೇಕೆಂದು ಸಿಪಿಎಂ ದ.ಕ‌.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು