3:23 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮಂಗಳೂರು: ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ

23/06/2024, 22:15

ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಭವನದಲ್ಲಿ ಭಾನುವಾರ ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನ ರಾಷ್ಟೀಯ ಅಧ್ಯಕ್ಷ ಚಿತ್ರ ಕುಮಾರ್ , ಕರ್ನಾಟಕ ರಾಜ್ಯದ ವಿವಿಧ ಪ್ರಾದೇಶಿಕ ಘಟಕಗಳ ಪರಿಚಯ ಮತ್ತು ಸಾಧನೆ ಬಗ್ಗೆ ವಿವರಿಸಿದರು. ತರಬೇತಿಗೆ ಆಗಮಿಸಿದ ಪ್ರಾದೇಶಿಕ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಘಟಕದ ಪದಾಧಿಕಾರಿಗಳು ಹಾಗೂ ಮಹಿಳಾ ಘಟಕದ ಸದಸ್ಯರುಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ತಿಳಿ ಹೇಳಿದರು . ಕರ್ನಾಟಕದ ಇನ್ನುಳಿದ ಪ್ರದೇಶಗಳಲ್ಲಿ ಹೊಸ ಘಟಕಗಳ ಆರಂಭ ಮತ್ತು ವಿಸ್ತರಣೆಯ ಕಾರ್ಯಯೋಜನೆ ಬಗ್ಗೆ ಗಮನ ಸೆಳೆದರು. ಮುಂದಿನ ದಿನಗಳಲ್ಲಿ ಆಂಧ್ರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಪ್ರಾದೇಶಿಕ ಘಟಕಗಳ ವಿಸ್ತರಣೆ ಬಗ್ಗೆ ತಿಳಿಸಿದರು.
ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಒಂದಾದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಪಿಪಿಎಫ್ ದೇಣಿಗೆ ನೀಡಿದ ಘಟಕದ ಸದಸ್ಯರಿಗೆ ಗೌರವಂದನೆಯನ್ನು ಸಲ್ಲಿಸಿದರು.
ಸಂಸ್ಥೆಯ ಆಡಳಿತ ವಿಭಾಗ ರಾಷ್ಟ್ರೀಯ ನಿರ್ದೇಶಕ ನವೀನ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಪೂರ್ವ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮುಖ್ಯ ತರಬೇತಿದಾರ ಡಾ. ಕೇದಿಗೆ ಅರವಿಂದ ರಾವ್, ಎಸ್ ಸಿ ಐ ರಾಷ್ಟ್ರೀಯ ಕಾನೂನು ಸಲಹೆಗಾರ ನಾಗೇಶ್, ರಾಷ್ಟ್ರೀಯ ಉಪಾಧ್ಯಕ್ಷರಾದ ಡಿ. ಕಿಶೋರ್ ಫರ್ನಾಂಡಿಸ್, ಬಿ. ಹುಸೇನ್ ಹೈಕಾಡಿ, ಪುಷ್ಪಾ ಶೆಟ್ಟಿ, ಡಾ. ಶಿವಕುಮಾರ್, ರಾಷ್ಟ್ರೀಯ ನಿರ್ದೇಶಕ ಓರಿಯಂಟೇಶನ್ ಕೆಪಿಎ ರೆಹಮಾನ್, ಮಂಗಳೂರು ಘಟಕ ನಿಕಟ ಪೂರ್ವ ಅಧ್ಯಕ್ಷ ಅಶೋಕ್ ಎಂಕೆ, ಮಂಗಳೂರು ಘಟಕ ಕಾರ್ಯದರ್ಶಿ ಸುನಂದ ಶಿವರಾಂ, ಪಿಎಸ್ ಟಿ ತರಬೇತಿ ಕಾರ್ಯಕ್ರಮದ ಕಾರ್ಯಕ್ರಮ ನಿರ್ದೇಶಕ ವಿಕಾಸ್ ಶೆಟ್ಟಿ ಉಪಸ್ಥಿತರಿದ್ದರು.
ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ದತ್ತಾತ್ರೇಯ ಬಾಳ ಸ್ವಾಗತಿಸಿದರು. ಅನಿಲ್ ಪಿಂಟೊ ಹಾಗೂ ಹರೀಶ್ ಎ. ಅತಿಥಿ ಪರಿಚಯ ಮಾಡಿದರು. ರಾಷ್ಟ್ರೀಯ ಖಜಾಂಜಿ ಜೋಸ್ ಖಂಡೋತ್ ವಂದಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯದ 70 ಘಟಕಗಳಿಂದ 300 ಘಟಕಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು