8:46 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ ಸಂಸದರಿಂದ ಪ್ರತಿಜ್ಞೆ ವಿಧಿ

24/06/2024, 11:56

ನವದೆಹಲಿ(reporterkarnataka.com): 18ನೇ ಲೋಕಸಭೆಯ ಪ್ರಥಮ ವಿಶೇಷ ಅಧಿವೇಶನ ಇಂದಿನಿಂದ (ಜೂ 24) ಆರಂಭಗೊಂಡಿದ್ದು, ಜುಲೈ 3ರವರೆಗೆ ನಡೆಯಲಿದೆ.
ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ರೂಪುಗೊಂಡ ಎನ್ ಡಿಎ ಮೈತ್ರಿಕೂಟದ ಮೊದಲ ಅಧಿವೇಶನ ಇದಾಗಿದೆ. ಸದನದ ನಾಯಕ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ನಾಯಕರು ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸತ್‌ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಇದೇ ಸಂದರ್ಭದಲ್ಲಿ ಲೋಕಸಭೆಯ
ನೂತನ ಸ್ಪೀಕರ್‌ ಆಯ್ಕೆಗಾಗಿ ಚುನಾವಣೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ನೆರವೇರಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಪ್ರಧಾನಿ ಮೋದಿ, ಆ ಬಳಿಕ ಸಚಿವ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಂತರ ಅಸ್ಸಾಂನಿಂದ ಮೊದಲ್ಗೊಂಡು ಪಶ್ಚಿಮ ಬಂಗಾಳ ರಾಜ್ಯದ ಸದಸ್ಯರು ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸುವರು. 280 ಸದಸ್ಯರು ಸೋಮವಾರ ಹಾಗೂ 264 ಸದಸ್ಯರು ಮಂಗಳವಾರ ಪ್ರಮಾಣ ಸ್ವೀಕರಿಸಲಿದ್ದಾರೆ.
ಜೂ. 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆ ಚುನಾವಣೆ ಹಾಗೂ ಜೂ.27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು