7:14 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ ಸಂಸದರಿಂದ ಪ್ರತಿಜ್ಞೆ ವಿಧಿ

24/06/2024, 11:56

ನವದೆಹಲಿ(reporterkarnataka.com): 18ನೇ ಲೋಕಸಭೆಯ ಪ್ರಥಮ ವಿಶೇಷ ಅಧಿವೇಶನ ಇಂದಿನಿಂದ (ಜೂ 24) ಆರಂಭಗೊಂಡಿದ್ದು, ಜುಲೈ 3ರವರೆಗೆ ನಡೆಯಲಿದೆ.
ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ರೂಪುಗೊಂಡ ಎನ್ ಡಿಎ ಮೈತ್ರಿಕೂಟದ ಮೊದಲ ಅಧಿವೇಶನ ಇದಾಗಿದೆ. ಸದನದ ನಾಯಕ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ನಾಯಕರು ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸತ್‌ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಇದೇ ಸಂದರ್ಭದಲ್ಲಿ ಲೋಕಸಭೆಯ
ನೂತನ ಸ್ಪೀಕರ್‌ ಆಯ್ಕೆಗಾಗಿ ಚುನಾವಣೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ನೆರವೇರಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಪ್ರಧಾನಿ ಮೋದಿ, ಆ ಬಳಿಕ ಸಚಿವ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಂತರ ಅಸ್ಸಾಂನಿಂದ ಮೊದಲ್ಗೊಂಡು ಪಶ್ಚಿಮ ಬಂಗಾಳ ರಾಜ್ಯದ ಸದಸ್ಯರು ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸುವರು. 280 ಸದಸ್ಯರು ಸೋಮವಾರ ಹಾಗೂ 264 ಸದಸ್ಯರು ಮಂಗಳವಾರ ಪ್ರಮಾಣ ಸ್ವೀಕರಿಸಲಿದ್ದಾರೆ.
ಜೂ. 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆ ಚುನಾವಣೆ ಹಾಗೂ ಜೂ.27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು