2:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಆಶ್ರಮವಾಸಿಗಳಿಗೆ ದಿನಸಿ ಕಿಟ್ ವಿತರಣೆ

21/08/2021, 16:25

ಮಂಗಳೂರು(reporterkarnataka.com):   ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ನಗರದ ಕಾಪಿಕಾಡ್ ಬಳಿಯಿರುವ “ಸ್ನೇಹ ದೀಪ” ಆಶ್ರಮದಲ್ಲಿ ಆಶ್ರಮವಾಸಿಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸುವ  ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪ್ರಕಾಶ್  ಬಿ. ಸಾಲ್ಯಾನ್ ಮಾತನಾಡಿ, ದಿವಂಗತ ರಾಜೀವ್ ಗಾಂಧಿಯವರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆ ಹಾಗೂ ದಿ. ದೇವರಾಜ್ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಳುವವನಿಗೆ  ಭೂ ಒಡೆತನದ ಹಕ್ಕನ್ನು ನೀಡುವ ಮೂಲಕ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ  ಕಾರ್ಯ ಮಾಡಿದವರು ಎಂದು ಹೇಳಿದರು.

ಮಾಜಿ ಮೇಯರ್ ಮಹಾಬಲ ಮಾರ್ಲ, ಮಾಜಿ ಉಪಮೇಯರ್ ರಜನೀಶ್ ಕಾಪಿಕಾಡ್,  ಸ್ನೇಹ ದೀಪ ಆಶ್ರಮದ ಅಧ್ಯಕ್ಷ ತಪಸಂ, 
ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ, ನಗರ ಬ್ಲಾಕ್ ಪ್ರಧಾನ ಕಾರ್ಯದಶಿ ಯೋಗೀಶ್ ನಾಯಕ, ನಗರ ಬ್ಲಾಕ್ ಕಾರ್ಮಿಕ ಅಧ್ಯಕ್ಷ ಜಯರಾಜ್ ಕೋಟ್ಯಾನ್ ,ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರುಗಳಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್, ನಗರ ಬ್ಲಾಕ್  ಕಿಸಾನ್ ಘಟಕದ ಅಧ್ಯಕ್ಷ ರಿತೇಶ್ ಅಂಚನ್, ನಗರ ಬ್ಲಾಕ್ ಪರಿಶಿಷ್ಟ ಘಟಕದ ಅಧ್ಯಕ್ಷ ಮಿಥುನ ಉರ್ವಾ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿನಿರಜ್ ಪಾಲ್, ಲಕ್ಷ್ಮಣ್ ಶೆಟ್ಟಿ,ಗಿರೀಶ್ ಶೆಟ್ಟಿ, ಶೇಕ್ ಕೈಫ್, ಉದಯ್ ಆಚಾರ್, ಫಯಾಜ್ ,ಇಸ್ಮಾಯಿಲ್, ಕ್ಲಿಪ್ಬೋರ್ಡ್ ಸೊನ್ಸ್, ಸಂಶುದ್ದೀನ್ ಬಂದರ್ 
ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ  ರಾಕೇಶ್ ದೇವಾಡಿಗ ಸ್ವಾಗತಿಸಿದರು. ವಾರ್ಡ್ ಅಧ್ಯಕ್ಷ ರಾಜೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಮರ್ಥ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು