7:01 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಆಶ್ರಮವಾಸಿಗಳಿಗೆ ದಿನಸಿ ಕಿಟ್ ವಿತರಣೆ

21/08/2021, 16:25

ಮಂಗಳೂರು(reporterkarnataka.com):   ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ನಗರದ ಕಾಪಿಕಾಡ್ ಬಳಿಯಿರುವ “ಸ್ನೇಹ ದೀಪ” ಆಶ್ರಮದಲ್ಲಿ ಆಶ್ರಮವಾಸಿಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸುವ  ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪ್ರಕಾಶ್  ಬಿ. ಸಾಲ್ಯಾನ್ ಮಾತನಾಡಿ, ದಿವಂಗತ ರಾಜೀವ್ ಗಾಂಧಿಯವರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆ ಹಾಗೂ ದಿ. ದೇವರಾಜ್ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಳುವವನಿಗೆ  ಭೂ ಒಡೆತನದ ಹಕ್ಕನ್ನು ನೀಡುವ ಮೂಲಕ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ  ಕಾರ್ಯ ಮಾಡಿದವರು ಎಂದು ಹೇಳಿದರು.

ಮಾಜಿ ಮೇಯರ್ ಮಹಾಬಲ ಮಾರ್ಲ, ಮಾಜಿ ಉಪಮೇಯರ್ ರಜನೀಶ್ ಕಾಪಿಕಾಡ್,  ಸ್ನೇಹ ದೀಪ ಆಶ್ರಮದ ಅಧ್ಯಕ್ಷ ತಪಸಂ, 
ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ, ನಗರ ಬ್ಲಾಕ್ ಪ್ರಧಾನ ಕಾರ್ಯದಶಿ ಯೋಗೀಶ್ ನಾಯಕ, ನಗರ ಬ್ಲಾಕ್ ಕಾರ್ಮಿಕ ಅಧ್ಯಕ್ಷ ಜಯರಾಜ್ ಕೋಟ್ಯಾನ್ ,ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರುಗಳಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್, ನಗರ ಬ್ಲಾಕ್  ಕಿಸಾನ್ ಘಟಕದ ಅಧ್ಯಕ್ಷ ರಿತೇಶ್ ಅಂಚನ್, ನಗರ ಬ್ಲಾಕ್ ಪರಿಶಿಷ್ಟ ಘಟಕದ ಅಧ್ಯಕ್ಷ ಮಿಥುನ ಉರ್ವಾ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿನಿರಜ್ ಪಾಲ್, ಲಕ್ಷ್ಮಣ್ ಶೆಟ್ಟಿ,ಗಿರೀಶ್ ಶೆಟ್ಟಿ, ಶೇಕ್ ಕೈಫ್, ಉದಯ್ ಆಚಾರ್, ಫಯಾಜ್ ,ಇಸ್ಮಾಯಿಲ್, ಕ್ಲಿಪ್ಬೋರ್ಡ್ ಸೊನ್ಸ್, ಸಂಶುದ್ದೀನ್ ಬಂದರ್ 
ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ  ರಾಕೇಶ್ ದೇವಾಡಿಗ ಸ್ವಾಗತಿಸಿದರು. ವಾರ್ಡ್ ಅಧ್ಯಕ್ಷ ರಾಜೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಮರ್ಥ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು