2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು

26/06/2024, 11:40

ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ
ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.


ಮನೆಯೊಳಗಿದ್ದ ಯಾಸಿರ್ (45), ಪತ್ನಿ ಮಾರಿಯಮ್ಮ( 40), ಮಕ್ಕಳಾದ ರಿಯನ ಮತ್ತು ರೀಫನಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಡೌಡಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಶವವನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ನಡೆಯಲಿರುವ ಪ್ರಗತಿ ಪರಿಶೀನ ಸಭೆ ಆಗಮಿಸಿದ್ದ ಸ್ಪೀಕರ್ ಯು. ಟಿ. ಖಾದರ್ ನೇರವಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು