9:13 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ಬಜಾಲ್ ಅಂಡರ್ ಪಾಸ್ ಮತ್ತೆ ಭರ್ತಿ: ಮಳೆ ನೀರಿನಿಂದ ಸಂಚಾರ ಸ್ಥಗಿತ; 10-15 ವರ್ಷಗಳಿಂದ ಸಮಸ್ಯೆ ಜೀವಂತ; ಅಧಿಕಾರಸ್ಥರು ಮೌನ!

26/06/2024, 15:44

ಮಂಗಳೂರು(reporterkarnataka.com): ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಕಳೆದ 10-15 ವರ್ಷಗಳಿಂದ ಈ ಸಮಸ್ಯೆ ಜೀವಂತವಾಗಿದೆ.


ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ, ಎಕ್ಕೂರು ಹೈವೇ,ಜಪ್ಪಿನ ಮೊಗರು ಕಡೆಗೆ ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ. ಸ್ಥಳೀಯ ಕಾರ್ಪೋರೇಟರ್ ಮಾತನಾಡುತ್ತಿಲ್ಲ. ಪಾಲಿಕೆ, ಜಿಲ್ಲಾಡಳಿತ ಮೌನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು