1:07 AM Monday8 - July 2024
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಮಾಸ್ಕೋ ಭೇಟಿ: ಭಾರತ- ರಷ್ಯಾ ಸಂಬಂಧ ಇನ್ನಷ್ಟು ಬಲಗೊಳಿಸಲು ಮಾತುಕತೆ ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ… ಜೀ ಕನ್ನಡದ ‘ಮಹಾನಟಿ’ ಗ್ರಾಂಡ್ ಫಿನಾಲೆಗೆ ಮೂಡುಬಿದ್ರೆಯ ಆರಾಧನಾ ಭಟ್: ಶಿಕ್ಷಣ ಕಾಶಿಯ… ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್… ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ… ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ… ಕೋಟರಿಂದ ತೆರವಾದ ಸ್ಥಾನದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್… ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ… ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ

26/06/2024, 16:45

ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರೇಟರ್ ಹಾಗೂ ಪಾಲಿಕೆಯ ಚೀಫ್ ಎಂಜಿನಿಯರ್ ನರೇಶ್ ಶೆಣೈ ಉಪಸ್ಥಿತರಿದ್ದರು.
ಕಳೆದ ಸರಿ ಸುಮಾರು 10-15 ವರ್ಷಗಳಿಂದ ಬಜಾಲ್ ಅಂಡರ್ ಪಾಸ್ ಸಮಸ್ಯೆ ಜೀವಂತವಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ ಕಡೆಗೆ, ಎಕ್ಕೂರು, ಜಪ್ಪಿನ ಮೊಗರು ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು