1:46 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು