2:45 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು