7:43 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು