10:50 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು