12:54 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು