7:54 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು