11:09 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು