11:59 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಅಧಿಕಾರ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಅಭಿವೃದ್ಧಿ ಪರ ರಾಜ್ಯ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ

21/08/2021, 21:16

ಮೈಸೂರು(reporterkarnataka.com):ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾಬಸ್ ಪೇಟೆ ಸಮೀಪದ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ಅಧಿಕಾರದಲ್ಲಿದ್ದಾಗ ನಾನು ಜನರಿಗೆ ಮೋಸ ಮಾಡಿಲ್ಲ ಎಂದರು.

ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಸಿಎಂ ಆದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಲಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಸಲು ಸಾಲಮನ್ನಾದಿಂದ ಸಾಧ್ಯವಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು