4:27 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ವಿವಾದಿತ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ: ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರ ಘೋಷಣೆ

28/06/2024, 18:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಜೂನ್ 29 ಶನಿವಾರದಂದು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಾಲೂಕಿನ ವಿವಾದಿತ ಹಲ್ಲರೆ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವುದಾಗಿ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ತಿಳಿಸಿದ್ದಾರೆ.
ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ಕಳೆದ ಆರು ತಿಂಗಳ ಹಿಂದೆ ಹಲ್ಲರೆ ಗ್ರಾಮ ಪಂಚಾಯಿತಿ ನಡಾವಳಿಯಂತೆ ಗ್ರಾಮದ ರಸ್ತೆ ಒಂದಕ್ಕೆ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಏರ್ಪಟ್ಟು ನಾಮಫಲಕ ಅಳವಡಿಸುವುದು ಹಾಗೆಯೇ ನಿಂತಿತ್ತು. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತಾಲೂಕು ತಹಸಿಲ್ದಾರ್ ಹಾಗೂ ಡಿವೈಎಸ್ ಪಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ ಶೀಘ್ರದಲ್ಲೇ ನಾಮಫಲಕ ಅಳವಡಿಸಿ ನ್ಯಾಯ ದೊರಕಿಸಿಕೊಡುವ ಭರವಸೆ ಹಾಗೂ ಗಡುವು ನೀಡಿದ್ದರು.
ಗಡುವು ಮುಗಿದರು ಇನ್ನೂ ಅದರ ಬಗ್ಗೆ ಯಾವುದೇ ಮಾಹಿತಿ ಹಾಗೂ ಕಾರ್ಯಕ್ರಮ ರೂಪಿಸದೆ ಇರುವುದು ನಿಜಕ್ಕೂ ತಾಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ನಮ್ಮ ಧಿಕ್ಕಾರವಿದೆ ಎಂದರು.
ತಾಲೂಕು ಮತ್ತು ಜಿಲ್ಲಾ ಆಡಳಿತ ವೈಫಲ್ಯ ಖಂಡಿಸಿ ಇದೆ 29ನೇ ತಾರೀಕಿನಂದು ಶನಿವಾರ ನಂಜನಗೂಡಿನಿಂದ ಹಲ್ಲರೆ ಗ್ರಾಮಕ್ಕೆ ಪಾದಯಾತ್ರೆ ನಡೆಸುವ ಮೂಲಕ ಹಲ್ಲರೆ ಚಲೋ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಪರ ಸಂಘಟನೆಗಳ ನೂರಾರು ಕಾರ್ಯಕರ್ತ ಮುಖಂಡರು ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಒಂದು ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ತಾಲೂಕು ಮತ್ತು ಜಿಲ್ಲಾಡಳಿತವೇ ನೇರ ಹೊಣೆಗಾರರಾಗಬೇಕಾಗುತ್ತದೆ. ಇಲ್ಲಿ ನಿಜವಾದ ಅಂಬೇಡ್ಕರ್ ವಿರೋಧಿಗಳು ಅಧಿಕಾರಿಗಳೇ ಎಂದು ಕಿಡಿ ಕಾರಿದರು.
ಇದು ಸಿಎಂ ತವರು ಜಿಲ್ಲೆ ಆದ್ದರಿಂದ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಪುಟ್ಟಸ್ವಾಮಿ ಪ್ರಧಾನ ಕಾರ್ಯದರ್ಶಿ ಜಯ ಶಂಕರ್ ಸಹಕಾರ್ಯದರ್ಶಿ ಕುಮಾರ್ ಖಜಾಂಚಿ ಯಶವಂತ್ ಕುಮಾರ್ ಮಾಧ್ಯಮ ಕಾರ್ಯದರ್ಶಿ ಪ್ರಶಾಂತ್ ಮುಖಂಡರಾದ ಅಭಿ ನಾಗಭೂಷಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು