3:58 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸತ್ತವರ ಹೆಸರಿನಲ್ಲಿಯೂ ಬಸವ ವಸತಿ ಯೋಜನೆ ಹಣ ಖಾತೆಗೆ ಜಮೆ: ಹಣ ಲಪಟಾಯಿಸಿದ ಪಿಡಿಒ ವಿರುದ್ದ ದೂರು

29/06/2024, 19:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಸವ ವಸತಿ ಯೋಜನೆ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಬಿಲ್ ಹಣ ಜಮೆ ಮಾಡಿ, ಹಣವನ್ನು ಲಪಟಾಯಿಸಿ ಅಕ್ರಮವೆಸಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ಯಲ್ಲಿ ಬೆಳಕಿಗೆ ಬಂದಿದೆ.


ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ಪಿಡಿಒ ನಿರ್ಮಲಾ ರವರು ಕಾನೂನಿಗೆ ವಿರುದ್ದವಾಗಿ ಮೃತಪಟ್ಟ ಫಲಾನುಭವಿ ಖಾತೆಗೆ 59,600/- ರೂ. ಜಮಾ ಮಾಡಿದ್ದಾರೆಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಮತ್ತು ಗಟ್ಟವಾಡಿಪುರ ಗ್ರಾಮದ ಮುಖಂಡ ರಾಜೇಶ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟವಾಡಿಪುರ ಗ್ರಾಮದ ಕೆಂಪಮ್ಮ ರವರಿಗೆ ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣ 2017-18 ನೇ ಸಾಲಿನಲ್ಲಿ ಮಂಜೂರಾಗಿದೆ. ಜಿಪಿಎಸ್ ನಂತರ 1 ಮತ್ತು 2 ನೇ ಬಿಲ್ ಅವರ ಖಾತೆಗೆ ಪಾವತಿಸಲಾಗಿದೆ. ಅನಾರೋಗ್ಯದ ನಿಮಿತ್ತ ಕೆಂಪಮ್ಮ ರವರು 9-1-2020 ರಂದು ಮೃತಪಟ್ಟಿದ್ದಾರೆ. ಹೀಗಿದ್ದರೂ ಪಿಡಿಒ ನಿರ್ಮಲಾ ರವರು ಸರ್ಟಿಫೈ ಮಾಡಿ 8-9-2023 ರಂದು ಮೃತ ಕೆಂಪಮ್ಮ ರವರ ಖಾತೆಗೆ 59,600/- ರೂಗಳನ್ನು ಕಾನೂನಿಗೆ ವಿರುದ್ದವಾಗಿ ಜಮೆ ಮಾಡಿದ್ದಾರೆ. ಆ ಹಣವನ್ನು ಬೇರೊಬ್ಬ ವ್ಯಕ್ತಿಯಿಂದ ಹಣವನ್ನು ಡ್ರಾ ಮಾಡಿಸಿ ಅಕ್ರಮವೆಸಗಿದ್ದಾರೆ. ಅಲ್ಲದೆ ಪಂಚಾಯ್ತಿ ಕಚೇರಿಯ ಸಮಯ ಹೊರತುಪಡಿಸಿ ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿರುವ ಕಂಪ್ಯೂಟರ್ ಸೆಂಟರ್ ನಲ್ಲಿ ಯಾವುದೇ ಸಭೆ ನಡಾವಳಿಗಳನ್ನು ಮಾಡದೆ ಪಂಚಾಯ್ತಿ ಲಾಗಿನ್ ಬಳಸಿಕೊಂಡು 57 ಕ್ಕೂ ಹೆಚ್ಚು ಇ- ಸ್ವತ್ತುಗಳನ್ನ ಮಾಡಿದ್ದಾರೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ. ಅಕ್ರಮ ಎಸಗಿರುವ ಪಿಡಿಒ ನಿರ್ಮಲಾ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು , ತನಿಖೆ ನಡೆಸಿ ಇಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಇಲ್ಲವಾದಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮುಂದೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೈಟ್.
ನಾಗಣ್ಣ, ಮಾಜಿ ಗ್ರಾಪಂ ಸದಸ್ಯರು ದೊಡ್ಡ ಕವಲಂದೆ.

ಇತ್ತೀಚಿನ ಸುದ್ದಿ

ಜಾಹೀರಾತು