7:05 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಡಗ ಎಡಪದವು: ಕೃತಕ ನೆರೆಗೆ ಕಾರಣವಾದ ನೂತನ ಕಿರು ಸೇತುವೆ; ಶಾಸಕ ಡಾ. ಭರತ್ ಶೆಟ್ಟಿ ಪರಿಶೀಲನೆ

29/06/2024, 20:37

ಬಡಗಎಡಪದವು(reporterkarnataka.com): ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬೈತರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕವಾಗಿ ತೋಡಿನ‌ ನೀರು ಹಾದು ಹೋಗುವ ನೆಲಮಟ್ಟಕಿಂತಲೂ 3-4 ಅಡಿ ಎತ್ತರದಲ್ಲಿ ಅಭಿವೃದ್ಧಿ ಪಡಿಸಿರುವಂತಹ ಕಿರು ಸೇತುವೆಯು ಕಳೆದ ಹಲವಾರು ದಿನಗಳಿಂದ ಸುರಿದ ನೀರಿಗೆ ತಡೆಯಾಗಿ ಪರಿಸರದ ಮನೆ, ಕಟ್ಟಡ, ದೇವಸ್ಥಾನ, ಹತ್ತಾರು ಮನೆಗಳಿಗೆ ಸಂಪರ್ಕಿಸುವ ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ‌ ನೆರೆಯ ಪರಿಸ್ಥಿತಿ ಉಂಟಾಗಿ ‌ಜನ‌ಜೀವನ ಅಸ್ತವ್ಯಸ್ತವಾಗಿದ್ದು,ಸ್ಥಳೀಯರ ದೂರಿನ ಮೇರೆಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಾಮಗಾರಿ ಆರಂಭದಿಂದಲೂ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಲವಾರು ಬಾರಿ ದೂರು ನೀಡಿದರೂ ಪ್ರತಿಭಟಿಸಿದವರ ಮೇಲೆ ಎಫ್.ಐ.ಆರ್ ಹಾಕಿ ಕಾಮಗಾರಿ‌ ಮುಂದುವರಿಸಿರುವ ಬಗ್ಗೆ ಸ್ಥಳೀಯರು ಶಾಸಕರಲ್ಲಿ ದೂರಿದರು. ಸ್ಥಳೀಯರು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಹಾಗೂ ಈಗ ಅಸಮರ್ಪಕವಾಗಿರುವ ಕಿರುಸೇತುವೆಯ ಬದಲಿಗೆ ನೀರು ನೈಸರ್ಗಿಕವಾಗಿ ಸರಾಗವಾಗಿ ಹರಿದು ಹೋಗುವಂತೆ ಹಾಗೂ ಪರಿಸರದ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಹಾಸ್, ಪಂಚಾಯತ್ ಸದಸ್ಯರಾದ ವಸಂತ್, ಸವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಕಾರ್ಯದರ್ಶಿ ಲಕ್ಷಣ್ ಸಫಳಿಗ, ಶಕ್ತಿಕೇಂದ್ರ ಪ್ರಮುಖ್ ತಾರನಾಥ ಸಫಳಿಗ, ಬೂತ್ ಅಧ್ಯಕ್ಷರಾದ ಉಮನಾಥ, ಶಿವಪ್ರಸಾದ್ ಶೆಟ್ಟಿ ಗ್ರಾಮಸ್ಥರಾದ ರಘವೀರ್, ಶ್ರೀನಿವಾಸ್ ಭಟ್, ಗ್ರಾಮಸ್ಥರು ಹಾಗೂ ದಿಲೀಪ್ ಬಿಲ್ಡ್ ಕಾನ್ ನ ಪ್ರಾಜೆಕ್ಟ್ ಹೆಡ್ ರಾಘವ ರಾವ್, ಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು