10:08 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ

29/06/2024, 21:09

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.


ಈ ಕುರಿತು ಸ್ಥಳಕ್ಕೆ ಭೇಟ ನೀಡಿ ಸೇತುವೆ ನಿರ್ಮಾಣವಾಗಿದ್ದನ್ನು ಮನಗಂಡ ನಂತರ ಹೇಳಿಕೆ ನೀಡಿದ ಅವರು, ಕಳೆದ ವರ್ಷ ಮಹಿಳೆಯರು ಹಾಗೂ ರೈತರು ಸೇರಿಕೊಂಡು ಬತ್ತದ ನಾಟಿಯನ್ನು ಹಾಡು ಹಾಡುವ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದಾದ ನಂತರ ಸೇತುವೆ ಹಾಗೂ ರಸ್ತೆ ಸುಮಾರು 1.80 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆಯಿಂದ ಕೇವಲ ಮುಂಡರಗಿ-ಬೆಳಗೇರಿ ಅಲ್ಲದೇ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಬಸ್ ಸಂಚಾರ ಬಂದಾಗಿತ್ತು. ಈದೀಗ ಬಸ್ ಸಂಚಾರವೂ ಆರಂಭವಾಗಲಿದೆ ಎಂದು ಅವರು ತಿಳಿಸಿದರು.


ಜೊತೆಗೆ ಸ್ಥಳದಲ್ಲಿಯೇ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದಾಗ ಶಾಸಕರು ಸಧ್ಯ ತಾತ್ಕಾಲಿಕವಾಗಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಬಾರ್ಡ, ಕೆಕೆಆರ್‌ಡಿಬಿ ಇಲ್ಲವೇ ತಮ್ಮ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದರಂತೆ ಈದೀಗ ಸೇತುವೆ ನಿರ್ಮಾಣವಾಗಿರುವುದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು. ಈದೀಗ ಶಾಸಕರು ಸಮಯ ನಿಗದಿಪಡಿಸಿ ಒಂದು ವಾರದಲ್ಲಿಯೇ ಸೇತುವೆ ಉದ್ಘಾಟನೆ ನೆರವೇರಿಸುವಂತೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಬೆಳಗೇರಾ ಗ್ರಾಮಸ್ಥರಾದ ಆಂಜಿನೇಯ ನಾಯ್ಕೋಡಿ, ರಫೀಕ್ ಪಟೇಲ್, ಬಾಬುಖಾನ್, ಈರಪ್ಪ, ನಿಂಗಪ್ಪ ಮೋನಪ್ಪ ಸೇರಿ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು