2:37 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು; ವನ್ಯ ಜೀವಿಗಳನ್ನು ರಕ್ಷಿಸುವಂತೆ ‘ವಂದೇ ಮಾತರಂ’ ಒತ್ತಾಯ

22/08/2021, 10:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಆ 21ರಂದು ತಡರಾತ್ರಿ ಕರಡಿ ಸಾವನ್ನಪ್ಪಿದೆ. ವಾಯು ವಿಹಾರಕ್ಕೆ ತೆರಳಿದ್ದ ನಾಗರೀಕರು ರಸ್ತೆ ಬದಿ ಕರಡಿ ಮೃತಪಟ್ಟಿರುವುದನ್ನು,ಅರಣ್ಯ ಇಲಾಖಾಧಿಕಾರಿಗೆ ತಿಳಿಸಿದ್ದು, ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಕರಡಿ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮಧ್ಯರಾತ್ರಿ ಕರಡಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರಬಹುದೆಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಮೂರು ನಾಲ್ಕು ವರ್ಷದ ಕರಡಿ ಇದಾಗಿ ಎನ್ನಲಾಗಿದೆ. ವರ್ಷದ ಹಿಂದೆಯಷ್ಟೇ ಇದೇ ರಸ್ತೆಯ ಒಂದು ಕಿಲೋ ಮೀಟರ್ ಅಂತರದಲ್ಲಿ ಕರಡಿಯೊಂದು ಇದೇ ತರನಾಗಿ ಮೃತಪಟ್ಟಿತ್ತು. ರಾಷ್ಟ್ರೀಯ ಹೆದ್ದಾರಿ ರಸ್ತೆ ದಾಟುವಾಗ ವನ್ಯ ಪ್ರಾಣಿಗಳು ಮೃಗಗಳು ಬಲಿಯಾಗುವುದು ಸಹಜ. ಅವುಗಳು ಮಾನವನ ನೆಮ್ಮದಿ ಹಾಳು ಮಾಡದಂತೆ ತಡೆಯಲು ಮತ್ತು ಅವುಗಳು ಹೀಗೆ ನಶಿಸದಂತೆ ಕಾಪಾಡಲು ಅವುಗಳನ್ನು ಸೂಕ್ತ ಸ್ಥಳಕ್ಕೆ ವರ್ಗಹಿಸಬೇಕಿದೆ.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶೀಘ್ರವೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ತಾಲೂಕು ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಕರಡಿಗಳು ಮತ್ತು ಚಿರತೆಗಳು ಇರುವಿಕೆ ಸಾಬೀತಾಗಿದೆ ಅವು ಮನುಷ್ಯನಿಗೆ ಹಾನಿ ಮಾಡುವ ಮೊದಲು ಮತ್ತು ಹೀಗೆ ಪ್ರಾಣ ಕಳೆದುಕೊಳ್ಳುವ ಮೊದಲು, ಮಾನವನ ನೆಮ್ಮದಿಗಾಗಿ ಅವುಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕಿದೆ ಎನ್ನುತ್ತಾರೆ ನಾಗರೀಕರು.

ಇತ್ತೀಚಿನ ಸುದ್ದಿ

ಜಾಹೀರಾತು