12:02 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು; ವನ್ಯ ಜೀವಿಗಳನ್ನು ರಕ್ಷಿಸುವಂತೆ ‘ವಂದೇ ಮಾತರಂ’ ಒತ್ತಾಯ

22/08/2021, 10:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಆ 21ರಂದು ತಡರಾತ್ರಿ ಕರಡಿ ಸಾವನ್ನಪ್ಪಿದೆ. ವಾಯು ವಿಹಾರಕ್ಕೆ ತೆರಳಿದ್ದ ನಾಗರೀಕರು ರಸ್ತೆ ಬದಿ ಕರಡಿ ಮೃತಪಟ್ಟಿರುವುದನ್ನು,ಅರಣ್ಯ ಇಲಾಖಾಧಿಕಾರಿಗೆ ತಿಳಿಸಿದ್ದು, ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಕರಡಿ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮಧ್ಯರಾತ್ರಿ ಕರಡಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರಬಹುದೆಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಮೂರು ನಾಲ್ಕು ವರ್ಷದ ಕರಡಿ ಇದಾಗಿ ಎನ್ನಲಾಗಿದೆ. ವರ್ಷದ ಹಿಂದೆಯಷ್ಟೇ ಇದೇ ರಸ್ತೆಯ ಒಂದು ಕಿಲೋ ಮೀಟರ್ ಅಂತರದಲ್ಲಿ ಕರಡಿಯೊಂದು ಇದೇ ತರನಾಗಿ ಮೃತಪಟ್ಟಿತ್ತು. ರಾಷ್ಟ್ರೀಯ ಹೆದ್ದಾರಿ ರಸ್ತೆ ದಾಟುವಾಗ ವನ್ಯ ಪ್ರಾಣಿಗಳು ಮೃಗಗಳು ಬಲಿಯಾಗುವುದು ಸಹಜ. ಅವುಗಳು ಮಾನವನ ನೆಮ್ಮದಿ ಹಾಳು ಮಾಡದಂತೆ ತಡೆಯಲು ಮತ್ತು ಅವುಗಳು ಹೀಗೆ ನಶಿಸದಂತೆ ಕಾಪಾಡಲು ಅವುಗಳನ್ನು ಸೂಕ್ತ ಸ್ಥಳಕ್ಕೆ ವರ್ಗಹಿಸಬೇಕಿದೆ.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶೀಘ್ರವೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ತಾಲೂಕು ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಕರಡಿಗಳು ಮತ್ತು ಚಿರತೆಗಳು ಇರುವಿಕೆ ಸಾಬೀತಾಗಿದೆ ಅವು ಮನುಷ್ಯನಿಗೆ ಹಾನಿ ಮಾಡುವ ಮೊದಲು ಮತ್ತು ಹೀಗೆ ಪ್ರಾಣ ಕಳೆದುಕೊಳ್ಳುವ ಮೊದಲು, ಮಾನವನ ನೆಮ್ಮದಿಗಾಗಿ ಅವುಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕಿದೆ ಎನ್ನುತ್ತಾರೆ ನಾಗರೀಕರು.

ಇತ್ತೀಚಿನ ಸುದ್ದಿ

ಜಾಹೀರಾತು