11:47 AM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಹಸಿರು ಉಳಿಸುವುದು ಅಗತ್ಯ: ಮಹಾದೇವಪ್ಪ

22/08/2021, 10:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ನಮ್ಮ ಉಸಿರು ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ತಾಲೂಕು ಶಿಕ್ಷಣಾಧಿಕಾರಿ ಮಹಾದೇವಪ್ಪ ಹೇಳಿದರು

ನಾಗಮಂಗಲ ಸಿಟಿ ಲಯನ್ಸ್ ಕ್ಲಬ್ ಉಪ್ಪಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪ್ರಜೆಗಳು ಕೊರೊನಾ ಸಂಕಟದಿಂದ ಆಗಿರುವ ಅನಾಹುತಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿಯೊಬ್ಬರು ಗಿಡಮರಗಳನ್ನು ಪೋಷಣೆ ಮಾಡುವ ಮುಖಾಂತರ ಕಾಡು ಉಳಿಸಿ ನಾಡು ಬೆಳೆಸಿ ಪರಿಪಾಠ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗಿಡ ಮರಗಳನ್ನು ಸಸಿಗಳನ್ನು ನೀಡುವುದರ ಜೊತೆಗೆ ಅವುಗಳ ಪೋಷಣೆಗಳನ್ನು ದಯಮಾಡಿ ಮುಂದೆ ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.

ಪ್ರಕೃತಿಯ ವರದಾನವಾಗಿರುವ ಪರಿಸರವನ್ನು ಎಲ್ಲರೂ ಸಂರಕ್ಷಿಸುವ ಹೂಣೆ ನಮ್ಮದಾಗಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ನಂದ ಕಿಶೋರ್ ಹಾಗೂ ಲಯನ್ಸ್ ರವರುಗಳಾದ ಗೀತಾದಾಸೇಗೌಡ, ವಸಂತ ಶ್ರೀಕಂಠಯ್ಯ ಜೆ.ಸಿ ನಂಜುಂಡೇಗೌಡ, ಬಸವೇಗೌಡ, ಉಗ್ರೇಗೌಡ ಅನೇಕ ಗಣ್ಯರು ಹಾಜರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು