9:28 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಹಸಿರು ಉಳಿಸುವುದು ಅಗತ್ಯ: ಮಹಾದೇವಪ್ಪ

22/08/2021, 10:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ನಮ್ಮ ಉಸಿರು ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ತಾಲೂಕು ಶಿಕ್ಷಣಾಧಿಕಾರಿ ಮಹಾದೇವಪ್ಪ ಹೇಳಿದರು

ನಾಗಮಂಗಲ ಸಿಟಿ ಲಯನ್ಸ್ ಕ್ಲಬ್ ಉಪ್ಪಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪ್ರಜೆಗಳು ಕೊರೊನಾ ಸಂಕಟದಿಂದ ಆಗಿರುವ ಅನಾಹುತಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿಯೊಬ್ಬರು ಗಿಡಮರಗಳನ್ನು ಪೋಷಣೆ ಮಾಡುವ ಮುಖಾಂತರ ಕಾಡು ಉಳಿಸಿ ನಾಡು ಬೆಳೆಸಿ ಪರಿಪಾಠ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗಿಡ ಮರಗಳನ್ನು ಸಸಿಗಳನ್ನು ನೀಡುವುದರ ಜೊತೆಗೆ ಅವುಗಳ ಪೋಷಣೆಗಳನ್ನು ದಯಮಾಡಿ ಮುಂದೆ ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.

ಪ್ರಕೃತಿಯ ವರದಾನವಾಗಿರುವ ಪರಿಸರವನ್ನು ಎಲ್ಲರೂ ಸಂರಕ್ಷಿಸುವ ಹೂಣೆ ನಮ್ಮದಾಗಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ನಂದ ಕಿಶೋರ್ ಹಾಗೂ ಲಯನ್ಸ್ ರವರುಗಳಾದ ಗೀತಾದಾಸೇಗೌಡ, ವಸಂತ ಶ್ರೀಕಂಠಯ್ಯ ಜೆ.ಸಿ ನಂಜುಂಡೇಗೌಡ, ಬಸವೇಗೌಡ, ಉಗ್ರೇಗೌಡ ಅನೇಕ ಗಣ್ಯರು ಹಾಜರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು