7:23 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಏರ್ ಪೋರ್ಟ್ ರನ್ ವೇಯಿಂದ ಹರಿದ ಮಳೆ ನೀರು ನೇರ ಬಡವರ ಮನೆಗೆ!!: ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

01/07/2024, 21:44

ಮಂಗಳೂರು(reporterkarnataka.com): ಮಂಗಳೂರು ಏರ್​​ಪೋರ್ಟ್ ಆಡಳಿತದ ವಿರುದ್ಧ ಸ್ಥಳೀಯರು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ವಿಮಾನ ನಿಲ್ದಾಣದ ರನ್​​ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳ ಮನೆಗೆ ನುಗ್ಗಿ ಕೃತಕ ನೆರೆಯ ಆವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಈ ಪ್ರತಿಭಟನೆ ನಡೆಸಿದ್ದಾರೆ.


ಸ್ಥಳೀಯರು ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಯಾವುದೇ ವಾಹನ ತೆರಳದಂತೆ ತಡೆಯೊಡ್ಡಿದರು. ವಿಷಯ ತಿಳಿಯುತ್ತಿದ್ದಂತೆ ಬಜಪೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ನಂತರ ಗ್ರಾಮಸ್ಥರ ಮನವೊಲಿಸಿದ ಪೊಲೀಸರು ರಸ್ತೆ ತೆರವುಗೊಳಿಸಿದರು.


ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗುವ ವಿಷಯದಲ್ಲಿ ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಏರ್ಪೋರ್ಟ್ ಸುತ್ತಮುತ್ತಲಿನ ಹಾಗೂ ಕೆಂಜಾರಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಂಗಳೂರು ಏರ್ ಪೋರ್ಟ್ ಟೇಬಲ್ ಟಾಪ್ ಏರ್ ಪೋರ್ಟ್ ಆಗಿರುವ ಕಾರಣ ಏರ್ ಪೋರ್ಟ್ ಆಡಳಿತ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದರಿಂದ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು