2:52 AM Sunday7 - July 2024
ಬ್ರೇಕಿಂಗ್ ನ್ಯೂಸ್
ಜೀ ಕನ್ನಡದ ‘ಮಹಾನಟಿ’ ಗ್ರಾಂಡ್ ಫಿನಾಲೆಗೆ ಮೂಡುಬಿದ್ರೆಯ ಆರಾಧನಾ ಭಟ್: ಶಿಕ್ಷಣ ಕಾಶಿಯ… ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲದು; ಬದಲಿಗೆ ಧರ್ಮದಲ್ಲಿರುವ ತಾರತಮ್ಯ ನಿವಾರಿಸಲಿ: ಪದ್ಮರಾಜ್… ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ… ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ… ಕೋಟರಿಂದ ತೆರವಾದ ಸ್ಥಾನದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್… ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ… ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕಾರ್ಯಕ್ರಮ

02/07/2024, 19:32

ಬೆಳ್ತಂಗಡಿ(reporterkarnataka.com): ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ಭಾನುವಾರ ನಡೆಯಿತು.
ಬೆಳ್ತಂಗಡಿ ಧರ್ಮ ಕ್ಷೇತ್ರದ ಪ್ರಧಾನ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಸಂದೇಶದಲ್ಲಿ ಫಾ| ಡಿ’ಮೆಲ್ಲೊ “ಕೊಂಕಣಿ ಭಾಷೆ ವೈವಿಧ್ಯತೆಗಳಿಂದ ಕೂಡಿದ ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಭಾಷೆ. ವೈಶಿಷ್ಠ್ಯಪೂರ್ಣ ಜಾನಪದ ಮತ್ತು ಗುಣಮಟ್ಟದ ಸಾಹಿತ್ಯ ಪರಂಪರೆ ಕೊಂಕಣಿಗೆ ಭಾಷೆಗೆ ಬಳುವಳಿಯಾಗಿ ಲಭಿಸಿದೆ. ಕೊಂಕಣಿ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದರ ಜತೆಗೆ, ಕೊಂಕಣಿ ಭಾಷೆಯಲ್ಲಿ ಪರಕೀಯ ಶಬ್ದಗಳ ನುಸುಳುವಿಕೆಯನ್ನು ತಡೆದು ವಿಶಿಷ್ಠತೆಯನ್ನು ಕಾಪಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹಿರಿಯ ಕೊಂಕಣಿ ಸಾಹಿತಿಗಳು, ಕಲಾವಿದರಿಂದ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು” ಎಂದು ಕರೆಕೊಟ್ಟರು.


ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು ಮತ್ತು ಅತಿಥಿಗಳನ್ನು ಪರಿಚಯಿಸಿ ಸ್ವಾಗತ ಕೋರಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಸಲಹಾ ಸಮಿತಿ ಸದಸ್ಯ ಎಚ್. ಎಂ. ಪೆರ್ನಾಲ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಲೋಕ ಕಾರ್ಯಕ್ರಮದಲ್ಲಿ ಸ್ಥಳೀಯ ಕವಿಗಳಾದ ರೋಬರ್ಟ್ ಡಿ ಸೋಜಾ ಮಡಂತ್ಯಾರ್, ಫ್ಲಾವಿಯಾ ಅಲ್ಬುಕೆರ್ಕ್, ಪುತ್ತೂರ್, ತೆಲ್ಮಾ ಮಾಡ್ತಾ, ಮಡಂತ್ಯಾರ್ ಸ್ವರಚಿತ ಕವಿತೆಗಳನ್ನು ವಾಚಿಸಿದರು. ಗುರುವಾಯನಕೆರೆಯ ವಿದ್ಯಾ ನಾಯಕ್ ಕೊಂಕಣಿ ಶಿಶುಗೀತೆಗಳನ್ನು ಪ್ರಸ್ತುತಪಡಿಸಿ, ಶಿಶುಗೀತೆಗಳ ಹಿನ್ನೆಲೆ, ಔಚಿತ್ಯ ಮತ್ತು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿಸ್ತಾರ ಮಾಹಿತಿ ನೀಡಿದರು. ಅಪೊಲಿನ್ ಡಿಸೋಜಾ ಮತ್ತು ತಂಡದವರು ಕೊಂಕಣಿ ಜೋಗುಳ ಹಾಡುಗಳನ್ನು ಸುಶ್ಯಾವ್ಯವಾಗಿ ಹಾಡಿ ಮಾಹಿತಿ ನೀಡಿದರು. ರೊನಾಲ್ಡ್ ಲೋಬೊ, ರೊನಾಲ್ದ್ ಡಿಸೋಜಾ ಮತ್ತು ಆರ್ವಿನ್ ಡಿಸೋಜಾ ಕೊಂಕಣಿ ಹಾಡುಗಳನ್ನು ಹಾಡುವುದರ ಮೂಲಕ ರಂಜಿಸಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳ ಕಾರ್ಯಕ್ರಮ ನಿರೂಪಿಸಿದರು. ಮಂಗ್ಳುರ್ಚಿ ಮೊತಿಯಾಂ ಸಂಘಟನೆಯ ವತಿಯಿಂದ ಅಲ್ಪೋನ್ಸ್ ಮೆಂಡೋನ್ಸಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು