4:05 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕಾರ್ಯಕ್ರಮ

02/07/2024, 19:32

ಬೆಳ್ತಂಗಡಿ(reporterkarnataka.com): ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ಭಾನುವಾರ ನಡೆಯಿತು.
ಬೆಳ್ತಂಗಡಿ ಧರ್ಮ ಕ್ಷೇತ್ರದ ಪ್ರಧಾನ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಸಂದೇಶದಲ್ಲಿ ಫಾ| ಡಿ’ಮೆಲ್ಲೊ “ಕೊಂಕಣಿ ಭಾಷೆ ವೈವಿಧ್ಯತೆಗಳಿಂದ ಕೂಡಿದ ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಭಾಷೆ. ವೈಶಿಷ್ಠ್ಯಪೂರ್ಣ ಜಾನಪದ ಮತ್ತು ಗುಣಮಟ್ಟದ ಸಾಹಿತ್ಯ ಪರಂಪರೆ ಕೊಂಕಣಿಗೆ ಭಾಷೆಗೆ ಬಳುವಳಿಯಾಗಿ ಲಭಿಸಿದೆ. ಕೊಂಕಣಿ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದರ ಜತೆಗೆ, ಕೊಂಕಣಿ ಭಾಷೆಯಲ್ಲಿ ಪರಕೀಯ ಶಬ್ದಗಳ ನುಸುಳುವಿಕೆಯನ್ನು ತಡೆದು ವಿಶಿಷ್ಠತೆಯನ್ನು ಕಾಪಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹಿರಿಯ ಕೊಂಕಣಿ ಸಾಹಿತಿಗಳು, ಕಲಾವಿದರಿಂದ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು” ಎಂದು ಕರೆಕೊಟ್ಟರು.


ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು ಮತ್ತು ಅತಿಥಿಗಳನ್ನು ಪರಿಚಯಿಸಿ ಸ್ವಾಗತ ಕೋರಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಸಲಹಾ ಸಮಿತಿ ಸದಸ್ಯ ಎಚ್. ಎಂ. ಪೆರ್ನಾಲ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಲೋಕ ಕಾರ್ಯಕ್ರಮದಲ್ಲಿ ಸ್ಥಳೀಯ ಕವಿಗಳಾದ ರೋಬರ್ಟ್ ಡಿ ಸೋಜಾ ಮಡಂತ್ಯಾರ್, ಫ್ಲಾವಿಯಾ ಅಲ್ಬುಕೆರ್ಕ್, ಪುತ್ತೂರ್, ತೆಲ್ಮಾ ಮಾಡ್ತಾ, ಮಡಂತ್ಯಾರ್ ಸ್ವರಚಿತ ಕವಿತೆಗಳನ್ನು ವಾಚಿಸಿದರು. ಗುರುವಾಯನಕೆರೆಯ ವಿದ್ಯಾ ನಾಯಕ್ ಕೊಂಕಣಿ ಶಿಶುಗೀತೆಗಳನ್ನು ಪ್ರಸ್ತುತಪಡಿಸಿ, ಶಿಶುಗೀತೆಗಳ ಹಿನ್ನೆಲೆ, ಔಚಿತ್ಯ ಮತ್ತು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿಸ್ತಾರ ಮಾಹಿತಿ ನೀಡಿದರು. ಅಪೊಲಿನ್ ಡಿಸೋಜಾ ಮತ್ತು ತಂಡದವರು ಕೊಂಕಣಿ ಜೋಗುಳ ಹಾಡುಗಳನ್ನು ಸುಶ್ಯಾವ್ಯವಾಗಿ ಹಾಡಿ ಮಾಹಿತಿ ನೀಡಿದರು. ರೊನಾಲ್ಡ್ ಲೋಬೊ, ರೊನಾಲ್ದ್ ಡಿಸೋಜಾ ಮತ್ತು ಆರ್ವಿನ್ ಡಿಸೋಜಾ ಕೊಂಕಣಿ ಹಾಡುಗಳನ್ನು ಹಾಡುವುದರ ಮೂಲಕ ರಂಜಿಸಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳ ಕಾರ್ಯಕ್ರಮ ನಿರೂಪಿಸಿದರು. ಮಂಗ್ಳುರ್ಚಿ ಮೊತಿಯಾಂ ಸಂಘಟನೆಯ ವತಿಯಿಂದ ಅಲ್ಪೋನ್ಸ್ ಮೆಂಡೋನ್ಸಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು